ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ಜು.04-ಶನಿವಾರ ಬಿರೂರು-ಸಮ್ಮಸಗಿ ರಸ್ತೆಯ ಬದಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂ ಆರೋಗ್ಯ ಮತ್ತು ಕುಟುಂಬ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು.
ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಓ ಪದ್ಮಾ ಬಸವಂತಪ್ಪ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪೂರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಮತ್ತಿತರರು ಇದ್ದರು

Leave a Reply

Your email address will not be published. Required fields are marked *