ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಬೆಂಬಲಿಗರಿಂದ ದಾಳಿ ನಡೆಸಿ ಹತ್ಯೆ ಗೈದಿದ್ದ. ಈ ಘಟನೆ ನಡೆದ 6 ದಿನಗಳ ಬಳಿಕ ತಲೆಮರೆಸಿಕೊಂಡಿದ್ದ ವಿಕಾಸ್ ದುಬೆಯನ್ನು ಬಂದಿಸಿದ್ದರು ನಂತರ ಇಂದು ಪೊಲೀಸರ ಅಧೀನದಲ್ಲಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಿಂದ ಕಾನ್ಪುರಕ್ಕೆ ಕರೆತರಲಾಗುತ್ತಿತ್ತು. ಆ ವೇಳೆ ಸುರಿದ ಭಾರೀ ಮಳೆಗೆ ಅವರಿದ್ದ ವಾಹನ ಅಪಘಾತಕ್ಕೀಡಾಗಿದೆ. ಆಗ ವಿಕಾಸ್ ದುಬೆ ಗಾಯಗೊಂಡು ಬಿದ್ದ ಪೊಲೀಸರ ಬಳಿ ಇದ್ದ ಬಂದೂಕವನ್ನು ಕಿತ್ತುಕೊಂಡು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆ ವೇಳೆ ವಿಕಾಸ್ ದುಬೆಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ.
ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ಗೆ ಬಲಿ
