ಮಾಯಕೊಂಡ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ ಜು.22, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ. ಎನ್.ಲಿಂಗಣ್ಣ ಇವರ ಅಧ್ಯಕ್ಷತೆಯಲ್ಲಿ ಜು.21 ರಂದು ದಾವಣಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಕೋವಿಡ್-19 ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲ್ಲೂಕಿನಲ್ಲಿ ಕೈಗೊಂಡ ಕಾಮಗಾರಿಗಳ ವಿವರಗಳನ್ನು ಪಡೆದುಕೊಂಡರು. ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿಗಳನ್ನು ಕೈಗೊಂಡ ಕೂಲಿಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಭೆಯಲ್ಲಿ ಮಾನ್ಯ ದಾರುಕೇಶ್.ಬಿ.ಎಂ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ದಾವಣಗೆರೆ ಇವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *