ದಾವಣಗೆರೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಆ.05 ,66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬಸವೇಶ್ವರ ಫೀಡರ್ನಲ್ಲಿ 24*7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆ.06 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ & ಬಿ ಬ್ಲಾಕ್, ಶಾಂತಿ ಆಲಯ, ಕುಂದುವಾಡ ರಸ್ತೆ ಅಥಣಿ ಕಾಲೇಜ್ ರಸ್ತೆ, ಅಂಗವಿಕಲರ ಶಾಲೆ, ಒಳಾಂಗಣಕ್ರೀಡಾಂಗಣ, ಕರ್ನಾಟಕ ಬ್ಯಾಂಕ್ ಶ್ಯಾಮನೂರು ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *